ನವದೆಹಲಿ: ‘ವಿಶಿಷ್ಟ ಗುರುತು ಪ್ರಾಧಿಕಾರ’ದ (ಯುಐಡಿಎಐ) ಅಧ್ಯಕ್ಷ ನಂದನ್ ನಿಲೇಕಣಿ ಅವರನ್ನು ರಾಜಕೀಯಕ್ಕೆ ಎಳೆದು ತರಲು
ಕಾಂಗ್ರೆಸ್ ತೀವ್ರವಾಗಿ ಪ್ರಯತ್ನಿಸುತ್ತಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದೆ.
ಪ್ರತಿಷ್ಠಿತ ‘ಇನ್ಫೋಸಿಸ್’ ಸಂಸ್ಥೆ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ನಿಲೇಕಣಿ ಅವರನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಎದುರು ಕಣಕ್ಕಿಳಿಸುವ ಕುರಿತು ಕಾಂಗ್ರೆಸ್ ಗಂಭೀರವಾಗಿ ಪರಿಶೀಲಿಸು ತ್ತಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.