ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಲ್ಕುಂದದಲ್ಲಿ ಹೆಚ್ಚಿನ ಮಳೆ

Last Updated 8 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದೆ. ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳಾನಾಡಿನಲ್ಲಿ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ನಿಲ್ಕುಂದದಲ್ಲಿ ಅತಿ ಹೆಚ್ಚು 11 ಸೆಂ.ಮೀ ಮೆಯಾಗಿದೆ. ಭಟ್ಕಳ, ಮಂಕಿ, ಆಗುಂಬೆ 5, ಬೆಳ್ತಂಗಡಿ 4, ಮೂಡಬಿದರೆ, ಧರ್ಮಸ್ಥಳ, ಪುತ್ತೂರು, ಸುಬ್ರಹ್ಮಣ್ಯ, ಮಂಗಳೂರು ವಿಮಾನ ನಿಲ್ದಾಣ, ಶಿರಾಲಿ, ಗೋಕರ್ಣ, ತಾಳಗುಪ್ಪ, ಶೃಂಗೇರಿ, ಚಾಮರಾಜನಗರ 3, ಪಣಂಬೂರು, ಮಂಗಳೂರು, ಮೂಲ್ಕಿ, ಬಂಟ್ವಾಳ, ಕಾರ್ಕಳ, ಸಿದ್ದಾಪುರ (ಉಡುಪಿ ಜಿಲ್ಲೆ), ಕದ್ರಾ, ಲಿಂಗನಮಕ್ಕಿ, ಜಯಪುರ 2, ಮಾಣಿ, ಕೋಟ, ಕೊಲ್ಲೂರು, ಹೊನ್ನಾವರ, ಕಾರವಾರ, ಅಂಕೋಲಾ, ಮಂಚಿಕೇರಿ, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ), ಗುಲ್ಬರ್ಗ, ಭಾಗಮಂಡಲ, ಮಡಿಕೇರಿ, ಸಾಗರ, ಕೊಪ್ಪ, ತರಿಕೆರೆ, ಗುಂಡ್ಲುಪೇಟೆ, ಯಳಂದೂರು, ಆನೇಕಲ್‌ನಲ್ಲಿ 1 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT