ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಅಧಿಕಾರಿ ಪುತ್ರ ಆತ್ಮಹತ್ಯೆ

Last Updated 5 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜರಾಜೇಶ್ವರಿನಗರ ಸಮೀಪದ ಬಿಎಚ್‌ಇಎಲ್‌ ಲೇಔಟ್‌­ನಲ್ಲಿ ವಿಜಯ್‌ ಜನಾರ್ದನ­ರಾವ್‌ (34) ಎಂಬುವರು ಗುರುವಾರ ಆತ್ಮ­ಹತ್ಯೆ ಮಾಡಿಕೊಂಡಿ­ದ್ದಾರೆ.

ಬಿಎಚ್‌ಇಎಲ್‌ ಲೇಔಟ್ ಎರಡನೇ ಅಡ್ಡರಸ್ತೆ ನಿವಾಸಿ ಜಗನ್ನಾಥರಾವ್‌ ಎಂಬುವರ ಮಗನಾದ ವಿಜಯ್‌ ಅವರು ಚಾಮರಾಜಪೇಟೆಯಲ್ಲಿ ಜಿಮ್‌ ಸೆಂಟರ್‌ ನಡೆಸುತ್ತಿದ್ದರು.

ಕುಟುಂಬ ಸದಸ್ಯರೆಲ್ಲಾ ಬೆಳಿಗ್ಗೆ ಸಂಬಂಧಿಕರ ಮದುವೆ ಸಮಾರಂಭಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರು ಮನೆಯಲ್ಲೇ ನೇಣು ಹಾಕಿಕೊಂಡಿ­ದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಗಡಿ ರಸ್ತೆಯ ಯುವತಿ­ಯೊಬ್ಬರ ಜತೆ 2014ರ ಜ.18ಕ್ಕೆ ಅವರ ಮದುವೆ ನಿಶ್ಚಯ­ವಾಗಿತ್ತು. ಜಗನ್ನಾಥರಾವ್‌ ಅವರು ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ರಾಜರಾಜೇಶ್ವರಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಪಘಾತ: ವೃದ್ಧೆ ಸಾವು
ಕೊತ್ತನೂರು ಮುಖ್ಯರಸ್ತೆಯಲ್ಲಿ ಗುರುವಾರ ನಸುಕಿನಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ.

ಮೃತರ ವಯಸ್ಸು ಸುಮಾರು 70 ವರ್ಷ. ಆದರೆ, ಅವರ ಗುರುತು ಪತ್ತೆ­ಯಾಗಿಲ್ಲ.
ಅವರು ರಸ್ತೆ ದಾಟುತ್ತಿದ್ದ ಸಂದರ್ಭ­ದಲ್ಲಿ ವಾಹನ ಡಿಕ್ಕಿ ಹೊಡೆದಿ­ರುವುದರಿಂದ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಂತರ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT