ಮೈಸೂರು: ನಿವೃತ್ತಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನಿವೃತ್ತಿ ವೇತನ ಹೆಚ್ಚಳ ಮಾಡಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಒಕ್ಕೂಟ ಒತ್ತಾಯಿಸಿದೆ.
`ಈಗ ನಿವೃತ್ತಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜೀವನದಲ್ಲಿ ಸಾಕಷ್ಟು ನೊಂದಿದ್ದಾರೆ. ಸರ್ಕಾರದ ಆದೇಶದಂತೆ ಪ್ರತಿ ತಿಂಗಳು 5ನೇ ತಾರೀಕಿನೊಳಗೆ ಗೌರವ ಧನ ಪಾವತಿಸಬೇಕು.
ಅಡುಗೆ ಮಾಡಲು ಗ್ಯಾಸ್ ಸ್ಟೌ, ಗ್ಯಾಸ್ ಮತ್ತು ಕುಕ್ಕರ್ಗಳನ್ನು ಒದಗಿಸಿರುವುದನ್ನು ಒಕ್ಕೂಟ ಸ್ವಾಗತಿಸುತ್ತದೆ~ ಎಂದು ಅಂಗನವಾಡಿ ಜಿಲ್ಲಾ ಕಾರ್ಯದರ್ಶಿ ಡಿ.ಜಗನ್ನಾಥ್ ತಿಳಿಸಿದ್ದಾರೆ.