ನವದೆಹಲಿ (ಪಿಟಿಐ): ಐಪಿಎಲ್ ಕಳ್ಳಾದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವೇಗಿ ಶ್ರೀಶಾಂತ್ ಮೇಲಿನ ಆಜೀವ ನಿಷೇಧವನ್ನು `ವಿಲಕ್ಷಣ' ಎಂದು ಟೀಕಿಸಿರುವ ಅವರ ವಕೀಲರಾದ ರೆಬೆಕಾ ಜಾನ್, ಇದು `ಸಹಜ ನ್ಯಾಯ ತತ್ವಕ್ಕೆ ಸಂಪೂರ್ಣ ವಿರುದ್ಧ'ವಾಗಿದೆ' ಎಂದು ಹೇಳಿದ್ದಾರೆ. ಅಲ್ಲದೇ ಭಾರತ ಕ್ರಿಕೆಟ್ ನಿಯಂತ್ರಣ ಸಂಸ್ಥೆಯ (ಬಿಸಿಸಿಐ) ಈ ನಿರ್ಧಾರವನ್ನು ಶ್ರೀಶಾಂತ್ ನ್ಯಾಯಾಲಯದಲ್ಲಿ ಪ್ರಶ್ನಿಸಲಿದ್ದಾರೆ ಎಂದೂ ಅವರು ನುಡಿದ್ದಾರೆ.
ಐಪಿಎಲ್ ಕಳ್ಳಾಟ ಪ್ರಕರಣ ಸಂಬಂಧ ಮಂಡಳಿಯ ಭ್ರಷ್ಟಾಚಾರ ವಿರೋಧಿ ಹಾಗೂ ಭದ್ರತಾ ಘಟಕದ ಮುಖ್ಯಸ್ಥ ರವಿ ಸವಾನಿ ನಡೆಸಿದ ಆಂತರಿಕ ತನಿಖೆಯಲ್ಲಿ ಶ್ರೀಶಾಂತ್ ತಪ್ಪಿತಸ್ಥ ಎಂದು ಸಾಬೀತಾದ್ದರಿಂದ ಬಿಸಿಸಿಐ ಅವರ ಮೇಲೆ ಆಜೀವ ನಿಷೇಧ ಹೇರಿದೆ.