ನೀರಾವರಿ ಅಧಿಕಾರಿಗಳ ಅಸಡ್ಡೆ ಧೋರಣೆ, ಬೇಡಿಕೆಗೆ ಸ್ಪಂದಿಸದೇ ಇರುವುದಕ್ಕೆ ಆಕ್ರೋಷಗೊಂಡಿದ್ದ ರೈತರು ತಾಳ್ಮೆ ಕಳೆದುಕೊಂಡು ಘೋಷಣೆ ಕೂಗಿದರು. ಈಗಾಗಲೇ ನೀರಾವರಿ ಇಲಾಖೆ ಯರಮರಸ್ ಉಪವಿಭಾಗದ ಅಧಿಕಾರಿಗಳ ಕಚೇರಿಗೆ ತೆರಳಿ ಪ್ರತಿಭಟನೆ ಮಾಡಿದ್ದಾಗಿದೆ. ಬೀಗ ಜಡಿದು ಬೇಡಿಕೆ ಈಡೇರಿಸಲು ಒತ್ತಾಯಿಸಲಾಗಿದೆ. ಆದರೆ ಇದ್ಯಾವುದಕ್ಕೂ ನೀರಾವರಿ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿದರು.
ಇನ್ನೊಂದೆರಡು ಬಾರಿ ಕಾಲುವೆಯ 104ನೇ ಮೈಲ್ ಕೆಳಭಾಗದ ಜಮೀನಿಗೆ ನೀರು ಹರಿಸಿದರೆ ಜಮೀನಿನಲ್ಲಿ ಬೆಳೆದ ಬೆಳೆ ಕೈಗೆಟುಕುತ್ತದೆ. ಇಲ್ಲದೇ ಇದ್ದರೆ ಹಾಳು ಎಂಬ ಸಮಸ್ಯೆಯನ್ನು ಒಂದುವರೆ ತಿಂಗಳಿಂದ ತರಲಾಗುತ್ತಿದ್ದರೂ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಅಪಾದಿಸಿದರು.