ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನಲ್ಲಿ ಕೊಚ್ಚಿ ಹೋಗಿ ಯುವಕ ಸಾವು

Last Updated 5 ಅಕ್ಟೋಬರ್ 2012, 18:30 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಸಂಗಮ್‌ನ ಬೊಮ್ಮಸಂದ್ರ ಪ್ರದೇಶದ ಕಾವೇರಿ ನದಿ ನೀರಿನಲ್ಲಿ ಯುವಕನೊಬ್ಬ ಕೊಚ್ಚಿಹೋಗಿ ಮೃತಪಟ್ಟಟ್ಟಿದ್ದಾನೆ.

ೃತ ಯುವಕನನ್ನು ಬೆಂಗಳೂರಿನ ಕೋಣನಕುಂಟೆ ಕ್ರಾಸ್ ನಿವಾಸಿ ಜರ್ಮಿ ಡಿಸೋಜಾ ಎಂಬುವರ ಪುತ್ರ ರೊನಾಲ್ಡ್ ಡಿಸೋಜಾ (28) ಎಂದು ಗುರುತಿಸಲಾಗಿದೆ. ಈತ ಮೂಲತಃ ಚಿಕ್ಕಮಗಳೂರಿನವನಾಗಿದ್ದು ಬೆಂಗಳೂರಿನಲ್ಲಿ ಪೇಯಿಂಟಿಂಗ್ ಕಂಟ್ರ್ಯಾಕ್ಟರ್ ಆಗಿದ್ದ ಎಂದು ತಿಳಿದು ಬಂದಿದೆ.

ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ 6 ಮತ್ತ ತಾಲ್ಲೂಕಿನ ಐನೋರ ಗೊಲ್ಲಳ್ಳಿಯ ಇಬ್ಬರು ಸ್ನೇಹಿತರ ಜೊತೆಗೂಡಿ ಸಂಗಮ್‌ನ ಕಾವೇರಿ ನದಿ ತೀರಕ್ಕೆ ಪಿಕ್‌ನಿಕ್‌ಗೆ ಬಂದಿದ್ದ. ಬೊಮ್ಮಸಂದ್ರ ಪ್ರದೇಶದ ನದಿ ನೀರಿನಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಆತ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT