ಈ ಕಾಮಗಾರಿಯನ್ನು ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ. ಕರ್ತಿಕೆರೆ, ಕುರುವಂಗಿ ಗ್ರಾಮಗಳಲ್ಲಿ ಟ್ಯಾಂಕ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಬೀಕನಹಳ್ಳಿ, ನಲ್ಲೂರು, ಅಲ್ಲಂಪುರ ಸೇರಿದಂತೆ ಉಳಿದೆಡೆ ಟ್ಯಾಂಕ್ ನಿರ್ಮಾಣ ಕಾಮಗಾರಿ ಆರಂಭದ ಹಂತದಲ್ಲಿದೆ. ಇದರೊಂದಿಗೆ ವಿವಿಧೆಡೆ ಕೊಳವೆ ಮಾರ್ಗ ಅಳವಡಿಕೆ ಕಾರ್ಯ ಭರದಿಂದ ಸಾಗುತ್ತಿದೆ. ಕುಡಿಯುವ ನೀರಿನ ಬವಣೆ ನೀಗಿಸಲು ಆದ್ಯತೆ ಮೇರೆಗೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಮುಂಬರುವ ಮಾರ್ಚ್ ಅಂತ್ಯದೊಳಗೆ ಪೂರ್ಣವಾಗಲಿದೆ ಎಂದು ಹೇಳಿದರು.