ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಲಬಾಂಬ್ ಸ್ಫೋಟ: 3 ಯೋಧರ ಹತ್ಯೆ

Last Updated 7 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ರಾಯಪುರ (ಪಿಟಿಐ): ನೆಲದಲ್ಲಿ ಹುದುಗಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ ಮಿನಿ ಟ್ರಕ್‌ನಲ್ಲಿ ಹೋಗುತ್ತಿದ್ದ ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ)ದ ಮೂವರು ಯೋಧರು ಮೃತಪಟ್ಟ ಘಟನೆ ಛತ್ತೀಸ್‌ಗಡದ ಮಾವೊವಾದಿಗಳ ಭದ್ರಕೋಟೆ ಎನಿಸಿದ ದಾಂತೇವಾಡ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ ಗಾಯಗೊಂಡಿರುವ ಮತ್ತೊಬ್ಬ ಯೋಧನ ಸ್ಥಿತಿ ಗಂಭೀರವಾಗಿದೆ ಎಂದು ನಕ್ಸಲ್ ಕಾರ್ಯಾಚರಣೆ ಪಡೆಯ ಹಿರಿಯ ಪೊಲೀಸ್ ಅಧಿಕಾರಿ ರಾಮ್ ನಿವಾಸ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ ಬಾಸ್ತನಾರ್ ಎಂಬ ಪ್ರದೇಶದಲ್ಲಿ ಈ ಘಟನೆ ಜರುಗಿದೆ. ಈ ಪ್ರದೇಶದಲ್ಲಿ ಸಲ್ವಾಜುಡಂ ಕಾರ್ಯಕರ್ತರ ನೆಲೆಗಳಿದ್ದು, ಯೋಧರು ಈ ನೆಲೆಗಳ ಬಳಿ ರಕ್ಷಣಾ ಕಾರ್ಯ ನಿರ್ವಹಿಸುತ್ತಿದ್ದರು ಎಂದು ನಿವಾಸ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT