ಅವರ ಮೇಲೆ ನನಗೆ ಅನುಮಾನವಿದೆ. ಇದೊಂದು ವ್ಯವಸ್ಥಿತ ಸಂಚು. ಕೂಡಲೇ ಪೊಲೀಸರು ಅವರನ್ನು ಕರೆಯಿಸಿ ವಿಚಾರಣೆ ನಡೆಸುವವರೆಗೂ ಮೃತದೇಹವನ್ನು ಸ್ವಾಧೀನಕ್ಕೆ ಪಡೆಯುವುದಿಲ್ಲ' ಎಂದು ಪಟ್ಟು ಹಿಡಿದರು.
ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜ್, ಸಬ್ ಇನ್ಸ್ಪೆಕ್ಟರ್ ರಾಜೇಶ್ ಗುಟಗುರ್ಕಿ ಸ್ಥಳ ಪರಿಶೀಲನೆ ನಡೆಸಿದರು.