ಸೋಮವಾರ ರಾತ್ರಿ ಕೆಲ ದುಷ್ಕರ್ಮಿಗಳು ಲಾಂಗ್ನಿಂದ ಹೊಡೆದು ಸಿದ್ದಲಿಂಗಪ್ರಭುವನ್ನು ಕೊಂದು ಪರಾರಿಯಾಗಿದ್ದಾರೆ. ಈ ಕುರಿತು ಸಿದ್ದಲಿಂಗಪ್ರಭುವಿನ ಸಂಬಂಧಿ ಬಸಪ್ಪ ಎಂಬಾತರು ಠಾಣೆಯಲ್ಲಿ ದೂರು ನೀಡಿದ್ದಾರೆ. ನೈಸ್ ಕಂಪೆನಿಯ ಮುಖ್ಯಸ್ಥ ಅಶೋಕ ಖೇಣಿ ಹಾಗೂ ಬಿಜೆಪಿ ಮುಖಂಡ ರುದ್ರೇಶ್ ಅವರು ಈ ಕೊಲೆ ಮಾಡಿಸಿರುವ ಸಾಧ್ಯತೆ ಇದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.