ಬೆಂಗಳೂರು: `ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಪಕ್ಷದ ಇತರ ನಾಯಕರ ವಿರುದ್ಧ ಮಾಡಿರುವ ಟೀಕೆಗಳಿಗೆ ನಾನು ಈಗಲೂ ಬದ್ಧ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ~ ಎಂದು ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ್ `ಪ್ರಜಾವಾಣಿ~ಗೆ ತಿಳಿಸಿದರು.
`ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಾಥರಾವ್ ಮಲ್ಕಾಪುರೆ ಅವರು ನನಗೆ ಇದೇ 6ರಂದು ನೀಡಿರುವ ನೋಟಿಸ್ಗೆ ಮಂಗಳವಾರ ಉತ್ತರ ನೀಡುತ್ತೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ~ ಎಂದು ಅವರು ಹೇಳಿದರು.