ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕರರಿಂದ ಅಂಚೆಕಾರ್ಡ್ ಚಳವಳಿ

Last Updated 4 ಫೆಬ್ರುವರಿ 2011, 9:55 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯದಲ್ಲಿ 6ನೇ ವೇತನ ಆಯೋಗ ರಚಿಸಬೇಕು ಹಾಗೂ ಮಧ್ಯಂತರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ವತಿಯಿಂದ ಗುರುವಾರ ನಗರದಲ್ಲಿ ಅಂಚೆ ಕಾರ್ಡ್ ಚಳವಳಿಗೆ ಚಾಲನೆ ನೀಡಲಾಯಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ನಡುವೆ ಸಾಕಷ್ಟು ವೇತನ ತಾರತಮ್ಯತೆ ಇದ್ದು, ಅದನ್ನು ಸರಿಪಡಿಸುವ ಉದ್ದೇಶದಿಂದ 6ನೇ ವೇತನ ಆಯೋಗ ರಚಿಸಬೇಕು; ಅದರ ಶಿಫಾರಸುಗಳು ಜಾರಿಗೆ ತರುವ ಮುನ್ನ ಮಧ್ಯಂತರ ಪರಿಹಾರ ನೀಡಬೇಕು; ವಂತಿಕೆ ಆಧಾರಿತ ನಿವೃತ್ತಿ ವೇತನ ಯೋಜನೆಯನ್ನು ಕೈ ಬಿಟ್ಟು ಎಲ್ಲ ನೌಕರರಿಗೆ ಹಳೆಯ ನಿವೃತ್ತಿ ವೇತನ ಪದ್ಧತಿಯನ್ನೇ ಮುಂದುವರಿಸಬೇಕು ಎಂದು ಮನವಿ ಮಾಡಲಾಗಿದೆ.

ಒಕ್ಕೂಟದ ಮಾಜಿ ಅಧ್ಯಕ್ಷ ಸುನೀಲ್ ವಿಶ್ವನಾಥ, ಕಾರ್ಯದರ್ಶಿ ರಾಹುಲ್ ಮೇತ್ರಿ, ಉಪಾಧ್ಯಕ್ಷ ಯಲ್ಲಪ್ಪ ಬಾಳಿಗಡ್ಡಿ, ಬಸವರಾಜ ಚನ್ನನವರ, ಎಲ್.ಕೆ. ಧಾರವಾಡ, ನದಾಫ್, ಡಿ.ಎಂ. ಬಿಡಿಕರ, ಎ.ಎನ್. ಅಷ್ಟಗಿಮಠ, ಮಂಜಪ್ಪ, ಬಿ.ಕೆ. ಪಾಟೀಲ, ಆದರ್ಶ ಕಿತ್ತೂರು, ಸತೀಶ ದೊಡ್ಡಮನಿ, ಸುರೇಶ ಕುರಡೆ ಮತ್ತಿತರರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.ಈ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT