ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾ. ಮಾರ್ಕಂಡೇಯಕಟ್ಜುಗೆ ನೋಟಿಸ್

Last Updated 10 ಡಿಸೆಂಬರ್ 2012, 21:01 IST
ಅಕ್ಷರ ಗಾತ್ರ

ಲಖನೌ (ಐಎಎನ್‌ಎಸ್): ನವದೆಹಲಿಯಲ್ಲಿ ಶನಿವಾರ ಜರುಗಿದ ವಿಚಾರ ಸಂಕಿರಣವೊಂದರಲ್ಲಿ `ಶೇ 90ರಷ್ಟು ಭಾರತೀಯರು ಮೂರ್ಖರು' ಎಂದು ಹೇಳಿದ್ದ ಭಾರತೀಯ ಪತ್ರಿಕಾ ಮಂಡಳಿ ಅಧ್ಯಕ್ಷ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಅವರಿಗೆ ಇಲ್ಲಿನ ಇಬ್ಬರು ವಿದ್ಯಾರ್ಥಿಗಳು ನೋಟಿಸ್ ನೀಡಿದ್ದಾರೆ.

ನ್ಯಾ. ಕಟ್ಜು ಅವರ ಹೇಳಿಕೆಯು ಅವಮಾನಕಾರಿಯಾಗಿದ್ದು, ತಮಗೆ ನೋವುಂಟು ಮಾಡಿದೆ. ಇದರಿಂದ ಭಾರತಕ್ಕೆ ಮತ್ತು ಭಾರತೀಯರ ಆತ್ಮಗೌರವಕ್ಕೆ ಧಕ್ಕೆಯುಂಟಾಗಿದೆ ಎಂದು ಕಾನೂನು ವಿದ್ಯಾರ್ಥಿ ತನ್ಯಾ ಠಾಕೂರ್ ಮತ್ತು ಅವರ ಸಹೋದರ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ಠಾಕೂರ್
ವಕೀಲರ ಮೂಲಕ ನೋಟಿಸ್ ನೀಡಿದ್ದಾರೆ.

`ಜವಾಬ್ದಾರಿಯುತ ಸ್ಥಾನದಲ್ಲಿರುವ ಕಟ್ಜು ಅವರು ವಿವೇಚನೆಯಿಂದ ಹೇಳಿಕೆ ನೀಡಬೇಕು. ಇಂತಹ ಹೇಳಿಕೆಯಿಂದ ಆಗುವ ಪರಿಣಾಮದ ಅರಿವು ಅವರಿಗೆ ಇರಬೇಕಿತ್ತು. ಅವರು ಒಂದು ತಿಂಗಳ ಒಳಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಕ್ಷಮೆ ಕೋರದಿದ್ದರೆ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ' ಎಂದು ಈ ವಿದ್ಯಾರ್ಥಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT