ಬೆಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗದ(ಎಸ್ಎಚ್ಆರ್ಸಿ) ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ದರ್ಮರ್ ಮುರುಗೇಶನ್ ಅವರನ್ನು ನೇಮಕ ಮಾಡಿ ಸರ್ಕಾರ ಮಂಗಳವಾರ ಆದೇಶಿಸಿದೆ.
ನ್ಯಾ. ಎಸ್.ಆರ್. ನಾಯಕ್ ಅವರು ನಿವೃತ್ತರಾದ ನಂತರ ಆಯೋಗದ ಅಧ್ಯಕ್ಷ ಸ್ಥಾನ ಖಾಲಿ ಉಳಿದಿತ್ತು. ಈ ಸಂಬಂಧ ರಾಜ್ಯ ಹೈಕೋರ್ಟ್ನಲ್ಲಿ ಇತ್ತೀಚೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ದಾಖಲಾಗಿತ್ತು. ‘ಅಧ್ಯಕ್ಷರ ಸ್ಥಾನಕ್ಕೆ ಅರ್ಹರನ್ನು ನೇಮಕ ಮಾಡುವ ವಿಚಾರದಲ್ಲಿ ಸರ್ಕಾರ ತ್ವರಿತ ಕ್ರಮಕೈಗೊಳ್ಳಬೇಕು’ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿತ್ತು.
ನ್ಯಾ.ಮುರುಗೇಶನ್ ಅವರು ಈ ಹಿಂದೆ ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅವರು 1994ರಿಂದ 96ರವರೆಗೆ ಚೆನ್ನೈ ಹೈಕೋರ್ಟ್ನಲ್ಲಿ ಸರ್ಕಾರದ ವಿಶೇಷ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ.
2000ರಲ್ಲಿ ಅವರನ್ನು ಚೆನ್ನೈ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು. ಮುರುಗೇಶನ್ ಅವರು ಕನ್ನಡ ಬಲ್ಲವರು ಎಂದು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.