ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಮೂರ್ತಿ ಹೇಳಿಕೆಗೆ ವಕೀಲರ ಸಂಘದ ಆಕ್ಷೇಪ

Last Updated 9 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಬೆಂಗಳೂರು: `ನ್ಯಾಯಮೂರ್ತಿ ಬಿ.ವಿ. ಪಿಂಟೋ ಅವರು ಮೈಸೂರಿನಲ್ಲಿ ವಕೀಲ ಸಮುದಾಯದ ಕುರಿತು ಆಡಿತ ಮಾತುಗಳು ಆಘಾತ ಉಂಟುಮಾಡಿವೆ' ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ ಹೇಳಿದ್ದಾರೆ.`ಬೆಂಗಳೂರಿನ ಬಹುತೇಕ ವಕೀಲರು ವೇಶ್ಯಾವಾಟಿಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ನ್ಯಾಯಮೂರ್ತಿ ಬಿ.ವಿ. ಪಿಂಟೋ ಅವರು ಮೈಸೂರಿನಲ್ಲಿ ಹೇಳಿಕೆ ನೀಡಿರುವುದನ್ನು ಸಂಘ ಖಂಡಿಸುತ್ತದೆ' ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

`ನ್ಯಾಯಮೂರ್ತಿಯವರ ಮಾತು ವಕೀಲ ಸಮುದಾಯದ ಪ್ರತಿಷ್ಠೆಗೆ ಧಕ್ಕೆ ತಂದಿದೆ. ಅವರು ಈ ರೀತಿ ಹೇಳಿಕೆ ನೀಡಿರುವುದು ದುರದೃಷ್ಟಕರ. ಮಂಗಳವಾರ ನಡೆಯಲಿರುವ ಸಂಘದ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗುವುದು' ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT