ಬೆಂಗಳೂರು: ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ ₨ 2,500 ನಿಗದಿಪಡಿಸಿ ರುವುದು ಸರಿಯಲ್ಲ. ಇಷ್ಟು ಹಣ ನೀಡಲು ತಮ್ಮಿಂದ ಸಾಧ್ಯ ಇಲ್ಲ ಎಂದು ಹೇಳಿರುವ ಸಕ್ಕರೆ ಕಾರ್ಖಾನೆಗಳ ಮಾಲೀಕರು ಈ ಕುರಿತು ಚರ್ಚಿಸಲು ಸೋಮವಾರ ಸಭೆ ಸೇರಲಿದ್ದಾರೆ. ಸಭೆ ಎಲ್ಲಿ ನಡೆಯುತ್ತದೆ ಎನ್ನುವುದು ಇನ್ನೂ ಖಚಿತವಾಗಿಲ್ಲ.
ಸರ್ಕಾರದ ನಿಲುವಿಗೆ ಆಕ್ಷೇಪ ಎತ್ತಿ ರುವ ಸಕ್ಕರೆ ಕಾರ್ಖಾನೆಗಳ ಮಾಲೀ ಕರು ಕಾರ್ಖಾನೆಗಳನ್ನು ಮುಚ್ಚಿ ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆ ಗಳ ಸಂಘಟನೆಯ ಕರ್ನಾಟಕ ಘಟಕದ ಸದಸ್ಯರು ಈ ಕುರಿತು ಸಭೆಯಲ್ಲಿ ಚರ್ಚಿಸಲಿದ್ದಾರೆ.