ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚತಾರಾ ಜೈಲು ಯಾತ್ರೆ: ಕಾಂಗ್ರೆಸ್ ವ್ಯಂಗ್ಯ

Last Updated 19 ಅಕ್ಟೋಬರ್ 2011, 20:10 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭ್ರಷ್ಟಾಚಾರ ಆರೋಪದ ಮೇಲೆ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ.

`ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರ ಪಂಚತಾರಾ ರಥಯಾತ್ರೆಯಂತೆ ಯಡಿಯೂರಪ್ಪ ಅವರದು ಪಂಚತಾರಾ ಜೈಲು ಯಾತ್ರೆ~ ಎಂದು ಪಕ್ಷದ ವಕ್ತಾರ ಅಭಿಷೇಕ್ ಸಿಂಘ್ವಿ ವ್ಯಂಗ್ಯವಾಡಿದ್ದಾರೆ.

ಜೈಲಿನಿಂದ ಹೊರಗುಳಿಯುವ ಯಡಿಯೂರಪ್ಪ ಅವರ ಎಲ್ಲ ಪ್ರಯತ್ನಗಳನ್ನೂ ಬಿಜೆಪಿ ಪ್ರೋತ್ಸಾಹಿಸಿದೆ ಎಂದು ಅವರು ಬುಧವಾರ ಸುದ್ದಿಗಾರರ ಬಳಿ ದೂರಿದರು.

`ಈ ದೇಶದ ಜನರನ್ನು ಮೂರ್ಖರನ್ನಾಗಿ ಮಾಡುವ ಈ ಪ್ರಯತ್ನ  ಖಂಡನೀಯ~ ಎಂದು ಟೀಕಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT