ನವದೆಹಲಿ (ಪಿಟಿಐ): ಭ್ರಷ್ಟಾಚಾರ ಆರೋಪದ ಮೇಲೆ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ.
`ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರ ಪಂಚತಾರಾ ರಥಯಾತ್ರೆಯಂತೆ ಯಡಿಯೂರಪ್ಪ ಅವರದು ಪಂಚತಾರಾ ಜೈಲು ಯಾತ್ರೆ~ ಎಂದು ಪಕ್ಷದ ವಕ್ತಾರ ಅಭಿಷೇಕ್ ಸಿಂಘ್ವಿ ವ್ಯಂಗ್ಯವಾಡಿದ್ದಾರೆ.
ಜೈಲಿನಿಂದ ಹೊರಗುಳಿಯುವ ಯಡಿಯೂರಪ್ಪ ಅವರ ಎಲ್ಲ ಪ್ರಯತ್ನಗಳನ್ನೂ ಬಿಜೆಪಿ ಪ್ರೋತ್ಸಾಹಿಸಿದೆ ಎಂದು ಅವರು ಬುಧವಾರ ಸುದ್ದಿಗಾರರ ಬಳಿ ದೂರಿದರು.
`ಈ ದೇಶದ ಜನರನ್ನು ಮೂರ್ಖರನ್ನಾಗಿ ಮಾಡುವ ಈ ಪ್ರಯತ್ನ ಖಂಡನೀಯ~ ಎಂದು ಟೀಕಿಸಿದರು.