ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಶೀಲ ಪಾದಯಾತ್ರೆಗೆ ಅದ್ದೂರಿ ಸ್ವಾಗತ

Last Updated 11 ಡಿಸೆಂಬರ್ 2013, 8:58 IST
ಅಕ್ಷರ ಗಾತ್ರ

ಚಾಮರಾಜನಗರ: ಬೌದ್ಧ ಧರ್ಮವನ್ನು ಪ್ರಚುರಪಡಿಸುವ ಪಂಚಶೀಲ ಪಾದಯಾತ್ರೆಯನ್ನು ತಾಲ್ಲೂಕಿನ ಮರಿಯಾಲದಹುಂಡಿಯಲ್ಲಿ ಗ್ರಾಮಸ್ಥರು ಸ್ವಾಗತಿಸಿದರು.

ಗ್ರಾಮದ ಅಂಬೇಡ್ಕರ್ ಸಮುದಾಯ ಭವನಕ್ಕೆ ಆಗಮಿಸಿ ಬುದ್ಧನ ಪಂಚಶೀಲ ಪಾದಯಾತ್ರೆಗೆ ಪೂಜೆ ಸಲ್ಲಿಸಿದರು. ನಂತರ, ಮೊಂಬತ್ತಿ ಹಿಡಿದು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಬಂತೇಜಿ ಸಂಘಪಾಲ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಹಣದ ಆಸೆಗೆ ಮಾನಸಿಕ ನೆಮ್ಮದಿ ದೂರವಾಗಿದೆ. ನೆಮ್ಮದಿಗಾಗಿ ಬುದ್ದನ ಸಂದೇಶಗಳನ್ನು ತಿಳಿದುಕೊಳ್ಳಬೇಕು. ಬುದ್ದ ಧರ್ಮವನ್ನು ಸ್ವೀಕರಿಸಿ ಶಾಂತಿ, ಸಹಬಾಳ್ವೆ ಹಾಗೂ ಅಹಿಂಸೆ ಮಾರ್ಗದಲ್ಲಿ ಸುಖದ ಜೀವನ ನಡೆಸಲು ಮುಂದಾಗಬೇಕು’ ಎಂದರು.

ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದ ಅಭಿವೃದ್ಧಿ ಪಡಿಸಲು ಮುಂದಾಗಬೇಕು. ದ್ವೇಷ, ಅಸೂಯೆ ಬಿಟ್ಟು ಶಾಂತಿಯ ಪಾಲನೆ ಮಾಡಬೇಕು. ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಬೇಕು. ಸುಶಿಕ್ಷತರಾಗಿ ಪ್ರಬುದ್ಧ ಭಾರತ ನಿರ್ಮಾಣ ಮಾಡಲು ಮುಂದಾಗಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗುತ್ತಿಗೆದಾರ ಎಂ.ಎಸ್. ಮಾದಯ್ಯ, ಮುಖಂಡರಾದ ದೇವಯ್ಯ, ಗುರುಪ್ರಸಾದ್, ಎಂ.ಬಿ. ಪ್ರಕಾಶ್, ಮಂಜು, ಮಹೇಶ್, ನಾಗರಾಜು, ಕುಮಾರ್, ಸಿ.ಎಂ. ಕೃಷ್ಣಮೂರ್ತಿ, ಸಂಬುದ್ದ ಟ್ರಸ್ಟ್‌ನ ಮಹೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT