ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಬೆಂಬಲ ವಾಪಸ್ ಪಡೆದ ಕಾರಣಕ್ಕೆ ಅನರ್ಹಗೊಂಡ ಐವರು ಪಕ್ಷೇತರ ಶಾಸಕರ ರಾಜಕೀಯ ಭವಿಷ್ಯವನ್ನು ಹೈಕೋರ್ಟ್ ಸೋಮವಾರ ನಿರ್ಧರಿಸಲಿದೆ.
ಪಿ.ಎಂ. ನರೇಂದ್ರ ಸ್ವಾಮಿ, ಗೂಳಿಹಟ್ಟಿ ಶೇಖರ್, ವೆಂಕಟರಮಣಪ್ಪ, ಡಿ. ಸುಧಾಕರ ಹಾಗೂ ಶಿವರಾಜ ತಂಗಡಗಿ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಮೋಹನಶಾಂತನಗೌಡರ್ ನೇತೃತ್ವದ ಪೂರ್ಣ ಪೀಠ ನಾಲ್ಕು ಗಂಟೆಗೆ ತೀರ್ಪು ಪ್ರಕಟಿಸಲಿದೆ.