~ಪಾನಮತ್ತ ದರ್ಶನ್ ಅವರು ವಿದ್ಯಾ ಮನೆಗೆ ಬಂದು ತಮ್ಮನ್ನು ಕರೆದುಕೊಂಡು ರಾಜ ರಾಜೇಶ್ವರಿ ನಗರದಲ್ಲಿರುವ ನಿವಾಸಕ್ಕೆ ಕರೆದೊಯ್ಯುವ ಸಮಯದಲ್ಲಿ ವಾಹನದಲ್ಲಿಯೇ ಮಾರಣಾಂತಿಕ ಹಲ್ಲೆ ನಡೆಸಿ, ರಿವಾಲ್ವರ್ ತೋರಿಸಿ ಕೊಲೆ ಬೆದರಿಕೆ ಹಾಕಿದರು~ ಎಂದು ವಿಜಯ ಲಕ್ಷ್ಮಿ ದೂರು ದಾಖಲಿಸಿದ್ದಾರೆ ಎಂದು ಪಶ್ಚಿಮ ವಲಯ ಡಿಸಿಪಿ ಸಿದ್ಧರಾಮಪ್ಪ ತಿಳಿಸಿದ್ದಾರೆ.
ಆದರೆ ದರ್ಶನ್ ಅವರು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ‘ತಾವು ವಿದ್ಯಾ ಮನೆಯಲ್ಲಿ ಪತ್ನಿ ಜತೆಯಲ್ಲಿದ್ದ ಮಗುವನ್ನು ವಾಹನದಲ್ಲಿ ತಿರುಗಾಡಿಸಲು ಕರೆದುಕೊಂಡು ಹೋಗಲು ಮುಂದಾದಾಗ ಮಗುವನ್ನು ನನ್ನೊಟ್ಟಿಗೆ ಕಳುಹಿಸಲು ಅವಳು ನಿರಾಕರಿಸಿದಳು. ಕಾರಣ ಅವಳ ಮೇಲೆ ಕೈಯಿಂದ ಹಲ್ಲೆ ಮಾಡಿದೆ. ಮುಂದೇನಾಯಿತು ಗೋತ್ತಿಲ್ಲ, ಆ ಸಮಯದಲ್ಲಿ ತಾನು ಮದ್ಯಪಾನ ಮಾಡಿದ್ದು ನಿಜ’ಎಂದು ಅವರು ತಿಳಿಸಿದ್ದಾರೆ.
ಈ ಮಧ್ಯೆ ವಿಜಯ ನಗರದ ಗಾಯತ್ರಿ ಆಸ್ಪತ್ರೆಗೆ ದಾಖಲಾಗಿರುವ ವಿಜಯ ಲಕ್ಷ್ಮಿ ಅವರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಅವರು ಭೇಟಿ ಮಾಡಿ ಘಟನೆ ಕುರಿತಂತೆ ಮಾಹಿತಿ ಪಡೆದು, ಅವರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.