ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿಗೆ ಕಿರುಕುಳ: ಕೇರಳ ಸಚಿವರ ರಾಜೀನಾಮೆ

Last Updated 2 ಏಪ್ರಿಲ್ 2013, 9:52 IST
ಅಕ್ಷರ ಗಾತ್ರ

ತಿರುವನಂತಪುರ (ಪಿಟಿಐ): ಕೇರಳದ ಅರಣ್ಯ ಸಚಿವ ಕೆ. ಬಿ. ಗಣೇಶ್ ಕುಮಾರ್ ಸೋಮವಾರ ತಡ ರಾತ್ರಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಳೆದ 15 ವರ್ಷಗಳಿಂದ ಗಣೇಶ್ ಕುಮಾರ್ `ನನಗೆ ಮಾನಸಿಕ ಕಿರುಕುಳ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾರೆ `ಎಂದು ಆರೋಪಿಸಿ ಗಣೇಶ್ ಅವರ ಪತ್ನಿ ಯಾಮಿನಿ ತಂಕಾಜಿ ಅವರು ಇಲ್ಲಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಗಣೇಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ.

ಸೋಮವಾರ ನಡೆದ ಕಲಾಪದಲ್ಲಿ ಈ ಘಟನೆ ಕುರಿತಂತೆ ವಿರೋಧ ಪಕ್ಷಗಳ ಸಚಿವರುಗಳು ರಾಜೀನಾಮೆಗೆ ಆಗ್ರಹಿಸಿ ಗದ್ದಲ ಎಬ್ಬಿಸಿದ್ದವು.
ಗಣೇಶ್‌ಕುಮಾರ್ ರಾಜೀನಾಮೆಯಿಂದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರಕ್ಕೆ ತೀವ್ರ ಮುಜುಗರವಾದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT