ಕೋಲ್ಕತ್ತ (ಐಎಎನ್ಎಸ್): ರಾಜ್ಯಪಾಲ ಎಂ.ಕೆ. ನಾರಾಯಣನ್ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸಿದ್ದ ಕಾರ್ಯಕ್ರಮವನ್ನು ವರದಿ ಮಾಡಲು ಬಂದಿದ್ದ ಮೂವರು ಪತ್ರಕರ್ತರನ್ನು ಪೊಲೀಸರು ಥಳಿಸಿದ ಘಟನೆ ಗುರುವಾರ ನಡೆದಿದೆ.
ಇಲ್ಲಿನ ತಾತ್ಕಾಲಿಕ ಸಚಿವಾಲಯ ಕಟ್ಟಡದ ಹೊರಭಾಗದಲ್ಲಿ ಘಟನೆ ನಡೆದಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.