ಬೆಂಗಳೂರು: `ಪತ್ರಕರ್ತರಿಗೂ ಯಶಸ್ವಿನಿ ಯೋಜನೆಯನ್ನು ವಿಸ್ತರಿಸಲಾಗುವುದು' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಭಾನುವಾರ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ `ವಜ್ರ ಮಹೋತ್ಸವ' ಉದ್ಘಾಟಿಸಿ ಅವರು ಮಾತನಾಡಿ, ವೈದ್ಯಕೀಯ ನೆರವಿಗೆ 5 ಕೋಟಿ ರೂಪಾಯಿ ಅನುದಾನ ಮತ್ತು ಕಡಿಮೆ ಬಡ್ಡಿದರದಲ್ಲಿ ಹತ್ತು ಕೋಟಿ ರೂಪಾಯಿ ಸಾಲವನ್ನು ನೀಡಲಾಗುವುದು ಎಂದರು. ಸಂಘದ ಅಧ್ಯಕ್ಷ ಬಿ.ಎನ್.ಶ್ರೀಧರ, ಕಾರ್ಯನಿರ್ವಾಹಕ ನಿರ್ದೇಶಕ ಸುದರ್ಶನ ಚನ್ನಂಗಿಹಳ್ಳಿ ಮತ್ತಿತರರಿದ್ದರು.