ರಾಮನಗರ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಜಿಲ್ಲಾ ಘಟಕದ ಸಭೆ ಜನವರಿ 30ರಂದು ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯು ಚನ್ನಪಟ್ಟಣ ತಾಲ್ಲೂಕಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿತು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಪಿ. ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದಾಧಿಕಾರಿಗಳು: ಜಿ.ಗಂಗಾಧರ್ ಅವರನ್ನು ಜಿಲ್ಲಾ ಸಂಘಟನಾ ಸಂಚಾಲಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದೆ. ತಾಲ್ಲೂಕು ಸಂಚಾಲಕರಾಗಿ ಎಂ.ಆರ್.ಶಾಂತಮೂರ್ತಿ, ತಾಲ್ಲೂಕು ಸಂಘಟನಾ ಸಂಚಾಲಕರಾಗಿ ರವೀಂದ್ರ, ರವಿ, ನಜ್ಜು, ಕೋನಯ್ಯ, ರಮೇಶ, ಮುನಿಯ ಹಾಗೂ ಉಪ ಸಂಚಾಲಕರಾಗಿ ಎಂ. ಕೃಷ್ಣ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.