ತಿರುವನಂತಪುರ, ಕೇರಳ (ಪಿಟಿಐ): ಇಲ್ಲಿನ ಪ್ರಸಿದ್ಧ ಶ್ರೀ ಅನಂತ ಪದ್ಮನಾಭಸ್ವಾಮಿ ದೇಗುಲದ ನೆಲಮಾಳಿಗೆಯಲ್ಲಿ ದೊರೆತಿರುವ ಅಪಾರ ಮೌಲ್ಯದ ನಿಧಿಯನ್ನು ವೈಜ್ಞಾನಿಕವಾಗಿ ದಾಖಲಿಸಲು ಸುಪ್ರೀಂ ಕೋರ್ಟ್ ರಚಿಸಿದ್ದ ಸಮಿತಿಯು, ಅಂತರ್ ರಾಷ್ಟ್ರೀಯ ವಸ್ತುಸಂಗ್ರಹಾಲಯ(ಇಂಟರ್ ನ್ಯಾಷನಲ್ ಕೌನ್ಸಿಲ್ ಆಫ್ ಮ್ಯೂಸಿಯಂ) ಮಂಡಳಿಯು ಸಿದ್ಧಪಡಿಸಿರುವ ವಿಶ್ವಮಟ್ಟದ ನಿಯಮಾವಳಿಯಂತೆ ದಾಖಲಿಸಲಿದೆ.