ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಎಂಟು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಆದರೆ, ಪರಮೇಶ್ ಚೆನ್ನೈಗೆ ತೆರಳಿದ್ದ ಕಾರಣ ಸಂಜೆಯವರೆಗೂ ಅವರ ಮನೆ, ಕಚೇರಿಗಳ ತಪಾಸಣೆ ಸಾಧ್ಯವಾಗಿರಲಿಲ್ಲ. ಅವರು ಬುಧವಾರ ಸಂಜೆ ಬೆಂಗಳೂರಿಗೆ ಹಿಂದಿರುಗಿದ ಬಳಿಕ ಶೋಧ ನಡೆಸಲಾಯಿತು.