ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ಬೃಹತ್ ಸಂಸ್ಥೆಗಳಿಗೆ ಧಾರೆ ಎರೆದುಕೊಟ್ಟು, ಲೂಟಿ ಹೊಡೆಯಲು ಅವಕಾಶ ಮಾಡಿಕೊಡುತ್ತಿದ್ದು, ಅವುಗಳ ಅಸ್ತಿತ್ವ ಉಳಿಸಲು ಎಲ್ಲರೂ ಹೋರಾಟ ಹಮ್ಮಿಕೊಳ್ಳುವ ಅಗತ್ಯವಿದೆ. ಆಯಾ ಗ್ರಾಮ ಪಂಚಾಯ್ತಿಗಳು ಠರಾವು ಮೂಲಕ ಇಂತಹ ಕೃತ್ಯಕ್ಕೆ ಕಡಿವಾಣ ಹಾಕಬೇಕು ಎಂದು ಅವರು ಕರೆ ನೀಡಿದರು.
ಗಣಿಗಾರಿಕೆ ದುಷ್ಪರಿಣಾಮ ಕುರಿತು ತಂಡದ ಡಿ.ಜಿ. ಚಿಕ್ಕೇರಿ ಮಾತನಾಡಿ, ಗಣಿಗಾರಿಕೆ ಇದ್ದಲ್ಲಿ ಬಡತನ ಕಟ್ಟಿಟ್ಟ ಬುತ್ತಿ ಇದ್ದಂತೆ ಎಂದರು. ರಾಜ್ಯ ರೈತ ಸಂಘ, ವಿಶ್ವಭಾರತಿ ಟ್ರಸ್ಟ್, ಇನ್ನಿತರ ಸಂಘಟನೆಗಳು ಬೆಂಬಲ ಸೂಚಿಸಿದವು.
ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಕೆ. ಮಂಜುನಾಥಗೌಡ, ವೀರಭದ್ರಗೌಡ, ವಿಶ್ವನಾಥ್ ಅದರಂತೆ, ಗುಡ್ಡಪ್ಪ ದೀಪಾಳಿ, ಭೈರಪ್ಪ ನಿಸರಾಣಿ, ಸರೋಜ ಹವಳದ್, ಸಿ.ವಿ. ಶೆಟ್ಟಿ, ತು.ಗು. ನಾಗರಾಜ್, ಪ್ರೊ.ಎಂ. ನಾರಾಯಣಪ್ಪ, ಸಂಜಯ್ಡೋಂಗ್ರೆ, ಶ್ರೀಧರಾಚಾರ್ ಇತರರು ಹಾಜರಿದ್ದರು.