ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಪರಿಸರಸ್ನೇಹಿ ಗಣಪತಿ ಪೂಜಿಸಿ'

Last Updated 2 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: `ಪರಿಸರವನ್ನು ನಾಶ ಮಾಡುವ ಮೂರ್ತಿಗಳ ಪೂಜೆಗಿಂತ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ಪೂಜಿಸುವುದು ಉತ್ತಮ' ಎಂದು ಪರಿಸರವಾದಿ ಅ.ನ. ಯಲ್ಲಪ್ಪ ರೆಡ್ಡಿ ಹೇಳಿದರು.

ಪರಿಸರ ಪ್ರಜ್ಞಾ ಇಕೊ ಕ್ಲಬ್ ಸೋಮವಾರ ರಾಜಾಜಿನಗರದ ವಿವೇಕಾನಂದ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ `ಪರಿಸರ ಸ್ನೇಹಿ ಗಣೇಶ ಸಪ್ತಾಹ ಜಾಥಾ' ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಶಾಸ್ತ್ರಗಳಲ್ಲಿ ವಿಗ್ರಹಗಳ ಬಗ್ಗೆ ವಿವರಣೆಯಿದೆ. ಆದರೆ, ವಿಗ್ರಹಗಳನ್ನು ಯಾವುದರಿಂದ ತಯಾರಿಸಬೇಕು ಎಂಬುದರ ಬಗ್ಗೆ ವಿವರಣೆಯಿಲ್ಲ. ಆದರೆ, ಇಂದಿನ ವೈಜ್ಞಾನಿಕ ಯುಗದಲ್ಲಿ ಪರಿಸರಕ್ಕೆ ಹಾನಿಯುಂಟು ಮಾಡದ ಮೂರ್ತಿಗಳನ್ನು ಪೂಜಿಸಬೇಕು' ಎಂದು ಅವರು ಅಭಿಪ್ರಾಯಪಟ್ಟರು.

`ಪರಿಸರ ಸ್ನೇಹಿ ಗಣಪತಿ ಮೂರ್ತಿಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಬರೀ ಆಕರ್ಷಣೆಗಾಗಿ ಬಣ್ಣದ ಗಣಪತಿ ಮೂರ್ತಿಗಳನ್ನು ಪೂಜಿಸುವುದರ ಬದಲು ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ಪೂಜಿಸಲು ಪಣ ತೊಡಬೇಕು' ಎಂದರು.

ರಾಜಾಜಿನಗರದಾದ್ಯಂತ ವಿದ್ಯಾರ್ಥಿಗಳು ಬ್ಯಾನರ್ ಹಿಡಿದು ಘೋಷಣೆಗಳನ್ನು ಕೂಗುತ್ತ ಜಾಥಾ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT