ನವದೆಹಲಿ/ಮಂಗಳೂರು: ರೈಲು ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ರೂ 5 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ರೂ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾ ಗುವುದು ಎಂದು ರೈಲ್ವೆ ಖಾತೆಯ ರಾಜ್ಯ ಸಚಿವ ಭರತ್ಸಿಂಗ್ ಸೋಲಂಕಿ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಬಂಧುಗಳಿಗೆ ರಾಜ್ಯ ಸರ್ಕಾರ ತಲಾ ರೂ 1 ಲಕ್ಷ ಪರಿಹಾರ ನೀಡಲಿದೆ. ಗಾಯಗೊಂಡವರಿಗೆ ರೂ 25 ಸಾವಿರ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಲಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದ್ದಾರೆ.