ಬಡರೋಗಿಗಳಿಗೆ ವೈದ್ಯರಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ಆರೋಪಿಸಿದ ಅವರು, ಮಗುವಿನ ಸಾವಿಗೆ ಕಾರಣರಾದ ಆಸ್ಪತ್ರೆ ಸಿಬ್ಬಂದಿ ಮೇಲೆ ಸೂಕ್ತ ಕ್ರಮ ಕೈಗೊಂಡು ಮಗುವಿನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ತಹಶೀಲ್ದಾರ್ ಎಚ್.ವಿ.ವಿಜಯರಾಜು ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಕರವೇ (ಪ್ರವೀಣ್ ಶೆಟ್ಟಿ ಬಣ) ಅಧ್ಯಕ್ಷ ಹಾಯ್ಕಲ್ ವಿರೂಪಾಕ್ಷ, ಟಿ.ಕಣುಮೇಶ್, ರಂಗನಾಥ, ಸುರೇಶ, ಪಿ.ಮಂಜುನಾಥ, ಸಿ.ರವಿಕುಮಾರ್, ರುದ್ರೇಶ್, ವೀರೇಶ್ ಇದ್ದರು.