ಹೂವಿನ ಹಿಪ್ಪರಗಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಆರ್.ಎಸ್. ತುಂಗಳ ಅವರನ್ನು ಪರೀಕ್ಷಾ ಸೇವೆಯಿಂದ ಅಮಾನತುಗೊಳಿಸಿದ್ದು, ಬೇರೊಬ್ಬರನ್ನು ನಿಯೋಜಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಹೂವಿನ ಹಿಪ್ಪರಗಿ ಪರೀಕ್ಷಾ ಕೇಂದ್ರಕ್ಕೆ ಬುಧವಾರ ತಾವು ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಸಂಗತಿ ಬೆಳಕಿಗೆ ಬಂತು. ಈ ಶಿಕ್ಷಕರು ಹಾಗೂ ಸಿಬ್ಬಂದಿಗೆ ಪರೀಕ್ಷಾ ಸೇವೆ ಇರಲಿಲ್ಲ. ಆದರೂ, ಅವರು ಆ ಕೇಂದ್ರದ ಖಾಲಿ ಕೊಠಡಿಯೊಂದರದಲ್ಲಿ ಕುಳಿತು ವಿದ್ಯಾರ್ಥಿಗಳಿಗೆ ನಕಲು ಮಾಡಿಸುವ ಪೂರ್ವತ ಯಾರಿಯಲ್ಲಿ ತೊಡಗಿದ್ದರು ಎಂದು ಡಿಡಿಪಿಐ ಹೇಳಿದ್ದಾರೆ.
1135 ಮಕ್ಕಳು ಗೈರು: ಬುಧವಾರ ನಡೆದ ಎಸ್ಎಸ್ಎಲ್ಸಿಯ ವಿಜ್ಞಾನ ವಿಷಯ ಪರೀಕ್ಷೆಗೆ 1135 ಮಕ್ಕಳು ಗೈರು ಉಳಿದಿದ್ದರು.28,893 ಮಕ್ಕಳು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 27,758 ಮಕ್ಕಳು ಮಾತ್ರ ಪರೀಕ್ಷೆ ಬರೆದರು ಎಂದು ನೋಡಲ್ ಅಧಿಕಾರಿ ನಾಗೇಂದ್ರ ಸಿನ್ನೂರ ತಿಳಿಸಿದ್ದಾರೆ.