ಬೆಂಗಳೂರು: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನಿಧನದ ಕಾರಣ ಬುಧವಾರ (ಡಿ.11) ದಂದು ನಡೆಯಬೇಕಿದ್ದ ಪದವಿ, ಕಾನೂನು ಮತ್ತು ದೂರ ಶಿಕ್ಷಣ ಕೋರ್ಸುಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆ ಹೊರಡಿಸಿದೆ.
ಪರೀಕ್ಷೆಗಳ ಮುಂದಿನ ದಿನಾಂಕವನ್ನು ಅತಿ ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಬೆಂಗಳೂರು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.