ಈ ವಿಷಯವನ್ನು ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಸಮ್ಮೇಳನವನ್ನು ಕಾನೂನು ಸಚಿವ ಎಸ್.ಸುರೇಶಕುಮಾರ್ ಉದ್ಘಾಟಿಸುವರು. ಪರಿಸರ ಸಚಿವ ಜೆ.ಕೃಷ್ಣ ಪಾಲೇಮಾರ್ ಸೇರಿದಂತೆ ಇತರರು ಈ ಸಮಾರಂಭದಲ್ಲಿ ಭಾಗವಹಿಸಿ, ಮಲೆನಾಡಿನಲ್ಲಿ ಯಾವ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎನ್ನುವದರ ಬಗ್ಗೆ ಚರ್ಚಿಸಲಿದ್ದಾರೆ ಎಂದರು.