ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.
ಪಾಂಡವಪುರದಲ್ಲಿ ಅತಿ ಹೆಚ್ಚು 17 ಸೆಂ.ಮೀ ಮಳೆಯಾಗಿದೆ. ಶ್ರೀರಂಗಪಟ್ಟಣ 10, ಕೆ.ಆರ್.ಪೇಟೆ 7 ಸೆಂಮೀ ಮಳೆಯಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಕೆಲವೆಡೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.