ಇಸ್ಲಾಮಾಬಾದ್ (ಪಿಟಿಐ): ಬಲೂಚಿಸ್ತಾನ ಪ್ರಾಂತ್ಯದಲ್ಲಿ ಹಿಂದೂ ವ್ಯಾಪಾರಿಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.
`ದುಷ್ಕರ್ಮಿಗಳು ಹಣ ಸುಲಿಗೆ ಮಾಡುವ ಉದ್ದೇಶದಿಂದ ಈ ಕೊಲೆ ನಡೆಸಿದ್ದಾರೆ. ಮೃತ ವ್ಯಾಪಾರಿಯನ್ನು ಸೇಠ್ ಅದೊ ಮಲ್ ಎಂದು ಗುರುತಿಸಲಾಗಿದೆ. ಇವರು ಮಾಜಿ ನಗರಸಭೆ ಸದಸ್ಯರೂ ಆಗಿದ್ದರು.
ಹತ್ಯೆಯನ್ನು ವಿರೋಧಿಸಿ ಸ್ಥಳೀಯ ವ್ಯಾಪಾರಿಗಳು ಕರಾಚಿ-ಕ್ವೆಟ್ಟಾ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು~ ಎಂದು `ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್~ ದಿನಪತ್ರಿಕೆ ವರದಿ ಮಾಡಿದೆ.