ನವದೆಹಲಿ (ಐಎಎನ್ಎಸ್): ಭಾರತದ ಗಡಿ ಒಳಗೆ ನುಸಳಲು ಉಗ್ರರಿಗೆ ಪಾಕಿಸ್ತಾನ ಸಹಾಯ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಾಕಿಸ್ತಾನವು ಉಗ್ರರಿಗೆ ಸಹಾಯ ಮಾಡುತ್ತಿರುವ ವಿಷಯ ಬೇಹುಗಾರಿಕೆ ಮೂಲಗಳಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಶಿಂದೆ ಮಾಹಿತಿ ನೀಡಿದ್ದಾರೆ.