ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಟೀಲ್ ಚೇತರಿಕೆ

Last Updated 1 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಗುಂಡೇಟಿನಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಸಿ.ಸಿ.ಪಾಟೀಲ್ ಆರೋಗ್ಯ ಸ್ಥಿರವಾಗಿದ್ದು, ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ.

`ಉದರದಲ್ಲಿ ರಕ್ತಸ್ರಾವ ಹಾಗೂ ಕರುಳಿನ ಸೋಂಕು ಕಂಡುಬಂದಿದ್ದರಿಂದ ಹೆಚ್ಚಿನ ನಿಗಾವಹಿಸಲಾಗಿದೆ. ಯಾವುದೇ ಶಸ್ತ್ರಚಿಕಿತ್ಸೆ ಮಾಡುವ ಅಗತ್ಯ ಕಂಡುಬಂದಿಲ್ಲ. ಇನ್ನೆರೆಡು ದಿನಗಳ ಕಾಲ ತೀವ್ರನಿಗಾ ಘಟಕದಲ್ಲಿ ಉಳಿಯಲಿದ್ದಾರೆ' ಎಂದು ಮಣಿಪಾಲ ಆಸ್ಪತ್ರೆಯ ನಿರ್ದೇಶಕ ಸುದರ್ಶನ ಬಲ್ಲಾಳ್ `ಪ್ರಜಾವಾಣಿ'ಗೆ ತಿಳಿಸಿದರು.   `ಆರೋಗ್ಯ ವಿಚಾರಿಸಲು ಆಗಮಿಸಿದ್ದ ಗೃಹ ಸಚಿವ ಆರ್.ಅಶೋಕ್ ಮತ್ತು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಶಾಸಕರು ಮಾತನಾಡಿದ್ದು, ಆರೋಗ್ಯ ಪರಿಸ್ಥಿತಿ ಸುಧಾರಿಸಿದೆ' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT