ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಟೀಲ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲೆಗೆ ಒತ್ತಾಯ

Last Updated 8 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಳಗಾವಿ: ಮರಾಠಿಗರನ್ನು ಪ್ರಚೋದಿಸುವಂತಹ ಹೇಳಿಕೆ ನೀಡಿದ ಮಹಾರಾಷ್ಟ್ರದ ಗೃಹ ಸಚಿವ ಆರ್.ಆರ್.ಪಾಟೀಲ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಒತ್ತಾಯಿಸಿದೆ.

`ಗಡಿ ವಿವಾದವು ಸುಪ್ರೀಂ ಕೋರ್ಟ್‌ನಲ್ಲಿರುವಾಗ ಆರ್. ಆರ್. ಪಾಟೀಲರು ಗಡಿ ಭಾಗದ ಮರಾಠಿಗರನ್ನು ಪ್ರಚೋದಿಸಲು ವಿವಾದಾತ್ಮಕ ಹೇಳಿಕೆ ನೀಡಿರುವುದು ಖಂಡನೀಯ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಬೇಕು' ಎಂದು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಆಗ್ರಹಿಸಿದರು.

ಪಾಟೀಲ ಪ್ರತಿಕೃತಿ ದಹನ: ಕನ್ನಡಿಗರ ಮನಸ್ಸಿಗೆ ನೋವಾಗುವಂತೆ ಮಹಾರಾಷ್ಟ್ರದ ಗೃಹ ಸಚಿವ ಪಾಟೀಲ ನೀಡಿರುವ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಯ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪಾಟೀಲರ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT