ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾತಕಿ ರವಿ ಪೂಜಾರಿ ಸಹಚರರ ಬಂಧನ

Last Updated 16 ಡಿಸೆಂಬರ್ 2012, 20:59 IST
ಅಕ್ಷರ ಗಾತ್ರ

ಬೆಂಗಳೂರು: ರೌಡಿ ವಿಜಯ್‌ಕುಮಾರ್ ಅಲಿಯಾಸ್ ಕವಳನನ್ನು ಕೊಲೆ ಮಾಡಲು ಹೊಂಚು ಹಾಕುತ್ತಿದ್ದ ಭೂಗತ ಪಾತಕಿ ರವಿ ಪೂಜಾರಿಯ ಸಹಚರರನ್ನು ಬಂಧಿಸಿರುವ ಶಿವಾಜಿನಗರ ಪೊಲೀಸರು ರಿವಾಲ್ವರ್ ಹಾಗೂ ಬೈಕ್ ವಶಪಡಿಸಿಕೊಂಡಿದ್ದಾರೆ.

ನಾಗವಾರ ಮುಖ್ಯರಸ್ತೆಯ ಆನಂದ್ (32) ಮತ್ತು ಬೊಮ್ಮನಹಳ್ಳಿಯ ಮಧು (23) ಬಂಧಿತರು. ರವಿ ಪೂಜಾರಿ ಸಹಚರರಾದ ಆರೋಪಿಗಳು ಶಿವಾಜಿನಗರದಲ್ಲಿ ಶನಿವಾರ ರಾತ್ರಿ ರೌಡಿ ಕವಳನನ್ನು ಕೊಲ್ಲಲು ಹೊಂಚು ಹಾಕುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ತಿಲಕ್‌ನಗರ ಠಾಣೆ ವ್ಯಾಪ್ತಿಯ ಶಬನಮ್ ಡೆವಲಪರ್ಸ್‌ ಕಚೇರಿಯಲ್ಲಿ 2007ರಲ್ಲಿ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದ್‌ನನ್ನು ಈ ಹಿಂದೆಯೇ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆತ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಕಾರಣಕ್ಕಾಗಿ ನ್ಯಾಯಾಲಯ ಆತನ ಬಂಧನಕ್ಕೆ ವಾರೆಂಟ್ ಜಾರಿ ಮಾಡಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT