ಈ ಭಾಗದಲ್ಲಿ ಗಟಾರದಲ್ಲಿ ಕೊಳಚೆ ನೀರು ನಿಂತಿರುವುದನ್ನು ಗಮನಿಸಿದ ಕಾರ್ಯನಿರ್ವಾಹಕ ಅಧಿಕಾರಿ ಚೆನ್ನಪ್ಪ ಮೊಯ್ಲಿ, ತಕ್ಷಣ ಇದನ್ನು ಸರಿ ಪಡಿಸುವಂತೆ, ಸ್ವಚ್ಚತೆಗೆ ಗಮನ ಹರಿಸು ವಂತೆ ಪಂಚಾಯತ್ ಅಭಿವೃದ್ದಿ ಅಧಿಕಾರಿಗೆ ಸೂಚಿಸಿದರು. ಆರೋಗ್ಯಾಧಿಕಾರಿ ಪ್ರಕಾಶ ಕಾಮತ್, ಹಿರಿಯ ಆರೋಗ್ಯ ಸಹಾಯಕ ಈರಯ್ಯ ದೇವಾಡಿಗ,ಕಂದಾಯ ನಿರೀಕ್ಷಕ ಬಂಟ್,ಗ್ರಾ.ಪಂ.ಅಧ್ಯಕ್ಷ ಚಂದ್ರು ದೇವಾಡಿಗ, ಅಭಿವೃದ್ದಿ ಅಧಿಕಾರಿ ಎಸ್ವಿ ಭಟ್, ಗ್ರಾ.ಪಂ. ಮಾಜಿ ಅಧ್ಯಕ್ಷ ಮಜುನಾಥ ಖಾರ್ವಿ ಮುಂತಾದವರು ಉಪಸ್ಥಿತರಿದ್ದರು.