ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಹಳ್ಳಿಯಲ್ಲಿ ಪ್ಯಾಸೆಂಜರ್ ನಿಲುಗಡೆ

Last Updated 13 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ:  ಬೆಂಗಳೂರು- ಮೈಸೂರು ನಡುವೆ ಸಂಚರಿಸುವ ಪ್ಯಾಸೆಂಜರ್ ರೈಲುಗಳನ್ನು ಶ್ರೀರಂಗಪಟ್ಟಣ ತಾಲ್ಲೂ ಕಿನ ಪಾಲಹಳ್ಳಿಯಲ್ಲಿ ನಿಲ್ಲಿಸಲು ರೈಲ್ವೆ ಮಂಡಳಿ ನಿರ್ಧರಿಸಿದೆ.

ರೈಲ್ವೆ ಮಂಡಳಿ ಈ ಸಂಬಂಧ ಸೋಮವಾರ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳು. ರೈತರು ಮತ್ತಿತರರಿಗೆ ಅನುಕೂಲ  ಮಾಡಿಕೊಡುವ ಉದ್ದೇಶದಿಂದ ಪ್ಯಾಸೆಂಜರ್ ರೈಲುಗಳನ್ನು ಪಾಲಹಳ್ಳಿಯಲ್ಲಿ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುನಿಯಪ್ಪ ತಿಳಿಸಿದರು.

ಪಾಲಹಳ್ಳಿಯಲ್ಲಿ ಪ್ಯಾಸೆಂಜರ್ ರೈಲುಗಳನ್ನು ಕೆಲವು ವರ್ಷಗಳ ಹಿಂದೆ ನಿಲ್ಲಿಸಲಾಗುತಿತ್ತು. ಅನಂತರ ಇದನ್ನು ಕೈಬಿಡಲಾಗಿತ್ತು.

ಇದನ್ನು ಪ್ರತಿಭಟಿಸಿ ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಂಕರೇಗೌಡ, ದೇವರಾಜ್, ನಾಗರಾಜ್, ವಿ.ನಾರಾಯಣ ಮತ್ತು  ಗ್ರಾಮಸ್ಥರು ಸತತ ಪ್ರತಿಭಟನೆ ನಡೆಸಿದಲ್ಲದೆ, ರೈಲ್ವೆ ಸಚಿವ ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT