ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ ಸದಸ್ಯನ ವಿರುದ್ಧ ಜಾತಿ ನಿಂದನೆ ಪ್ರಕರಣ

Last Updated 16 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೈರಸಂದ್ರ ವಾರ್ಡ್‌ನ ಪಾಲಿಕೆ ಸದಸ್ಯ ನಾಗರಾಜ್ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

 ನಾಗರಾಜ್ ವಿರುದ್ಧ ದೂರು ದಾಖಲಿಸಿರುವ ಬೈರಸಂದ್ರ ನಿವಾಸಿ ಬಿ.ಇ.ದಾಸಪ್ಪ ಎಂಬುವರು, `ನಾಗರಾಜ್ ನನ್ನ ಜಾತಿ ಹೆಸರನ್ನು ಬಳಸಿ ನಿಂದಿಸಿದ್ದಾರೆ~ ಎಂದು ಆರೋಪಿಸಿದ್ದಾರೆ.

ಬಿಬಿಎಂಪಿ ಚುನಾವಣೆ ವೇಳೆ ಬೈರಸಂದ್ರ ವಾರ್ಡ್‌ನಿಂದ ಸ್ಪರ್ಧಿಸಿದ್ದ ನಾಗರಾಜ್ ಪರವಾಗಿ ದಾಸಪ್ಪರ ಕುಟುಂಬ ಪ್ರಚಾರ ಮಾಡಿದ್ದರು. ಮಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಂತೆ ನಾಗರಾಜ್‌ರನ್ನು ಕೋರಿದ್ದರು. ಈ ನೆಪದಲ್ಲಿ ಮಗಳನ್ನು ಮನೆಗೆ ಕರೆಸಿ ನಾಗರಾಜ್ ಅನುಚಿತವಾಗಿ ವರ್ತಿಸಿದ್ದರು~ ಎಂದು ದಾಸಪ್ಪ ಅವರು `ಪ್ರಜಾವಾಣಿ~ಗೆ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT