ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸಿ ವರದಿ ವಾಪಸ್: ಕಾರಣ ನೀಡಿಲ್ಲ- ಜೋಶಿ

Last Updated 17 ಜೂನ್ 2011, 19:55 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಂಚಿಕೆ ಹಗರಣದ ವರದಿಯನ್ನು ತಿರಸ್ಕರಿಸಿರುವ ಬಗ್ಗೆ ಲೋಕಸಭಾಧ್ಯಕ್ಷೆ ಮೀರಾ ಕುಮಾರ್ ಅವರು `ಯಾವುದೇ ಕಾರಣ~ ನೀಡಿಲ್ಲ ಎಂದು ಸಾರ್ವಜನಿಕ ಲೆಕ್ಕ ಸಮಿತಿ (ಪಿಎಸಿ) ಅಧ್ಯಕ್ಷ ಮುರಳಿ ಮನೋಹರ ಜೋಶಿ ಹೇಳಿದ್ದಾರೆ.

ವರದಿಯನ್ನು ವಾಪಸ್ ಮಾಡುವಾಗ ಸ್ಪೀಕರ್ ಅವರು ನೀಡಿರುವ ಕಾರಣಗಳ ಬಗ್ಗೆ ವಿವರಿಸಲು ನಿರಾಕರಿಸಿದ ಅವರು, ಹೊಸ ಪಿಎಸಿ ಮುಂದೆ ಈ ವರದಿ ಬಂದಾಗ ವಿವರಗಳು ಬಹಿರಂಗಗೊಳ್ಳುತ್ತವೆ ಎಂದಿದ್ದಾರೆ.

ಈ ವರ್ಷದ ಮೇ 1ರಂದು ಅಸ್ತಿತ್ವಕ್ಕೆ ಬಂದ ಹೊಸ ಪಿಎಸಿ ಅಧ್ಯಕ್ಷರೂ ಆಗಿರುವ ಜೋಷಿ, ಸಮಿತಿ ವರದಿಗೆ ಸಂಬಂಧಿಸಿದಂತೆ ಹೇಳುವುದಾದರೆ ಈ ವಿಷಯ ಇಲ್ಲಿಗೇ ಮುಕ್ತಾಯ ಆಗುವುದಿಲ್ಲ ಎಂದು ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT