ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಮೇಲೆ ಎಸ್‌ಪಿ ಹಲ್ಲೆ: ದೂರು

Last Updated 2 ಜನವರಿ 2012, 19:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು: `ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ವಿಕಾಸ್ ತಮ್ಮ ಕಚೇರಿ ಕೊಠಡಿಯಲ್ಲೇ ಸೋಮವಾರ ಹಲ್ಲೆ ಮಾಡಿದ್ದಾರೆ~ ಎಂದು ಸಮೀಪದ ಮಲ್ಲಂದೂರು ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಬ್ ಇನ್‌ಸ್ಪೆಕ್ಟರ್ ಚಂದ್ರಶೇಖರ್ ಆರೋಪಿಸಿದ್ದಾರೆ.

ಅವರ ಬಲಗಣ್ಣಿನ ಹುಬ್ಬಿನ ಮೇಲೆ ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗ್ರಾಮಾಂತರ ವೃತ್ತದ ಇನ್‌ಸ್ಪೆಕ್ಟರ್ ಪಂಚಾಕ್ಷರಪ್ಪ, ತಮ್ಮ ವಿರುದ್ಧ ಕರ್ತವ್ಯ ಲೋಪದ ಬಗ್ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆಂದು ಸಂಜೆ ಎಸ್‌ಪಿ ಅವರ ಕೊಠಡಿಗೆ ಹೋಗಿದ್ದಾಗ ಹಲ್ಲೆ ನಡೆಸಿದರು ಎಂದು ಚಂದ್ರಶೇಖರ್ ಅವರು ಆರೋಪಿಸಿದ್ದಾರೆ.

`ಹಲ್ಲೆ ಮಾಡಿದ್ದೇನೆ ಎಂದು ಹೇಳಿದ್ದು ಯಾರು? ಚಂದ್ರಶೇಖರ್ 5-6 ದಿನಗಳಿಂದ ಗೈರು ಹಾಜರಾಗಿದ್ದಾರೆ. ಗ್ರಾಮಾಂತರ ಇನ್‌ಸ್ಪೆಕ್ಟರ್ ಈತನ ಅಶಿಸ್ತಿನ ಬಗ್ಗೆ ದೂರು ನೀಡಿದ್ದಾರೆ. ವಿಚಾರಣೆ ಕಾಯ್ದಿರಿಸಿ, ಅಮಾನತು ಮಾಡಿದ್ದೇನೆ. ಅಮಾನತು ಶಿಕ್ಷೆಯಿಂದ ಪಾರಾಗಲು ಹಲ್ಲೆಯ ನಾಟಕ ನಡೆಸುತ್ತಿರಬೇಕು~ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ವಿಕಾಸ್‌ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT