ಗೊಲ್ಲಹಳ್ಳಿ ವಾಸಿ ಬಸವರಾಜು (50) ಮೃತಪಟ್ಟ ರೈತ. ಕಳೆದ ಕೆಲ ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಅರಣ್ಯಕ್ಕೆ ಅಟ್ಟುವ ಪ್ರಯತ್ನ ನಡೆಸುತ್ತಿದ್ದರು. ಶುಕ್ರವಾರ ರಾತ್ರಿ ಗೊಲ್ಲಹಳ್ಳಿ ಬಳಿ ಬೀಡು ಬಿಟ್ಟಿದ್ದ ಆನೆಗಳು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಬಸವರಾಜು ಪಕ್ಕೆಗೆ ದಂತದಿಂದ ತಿವಿದು, ಬಿಸಾಡಿವೆ.