ಮಳವಳ್ಳಿ ಪುರಸಭೆಯ ಕಿರಿಯ ಎಂಜಿನಿಯರ್ ಪ್ರಕಾಶ್ ಹಾಗೂ ದ್ವಿತೀಯ ದರ್ಜೆ ಸಹಾಯಕ ಶಿವಲಿಂಗಯ್ಯ ಲೋಕಾಯಕ್ತರಿಗೆ ಸಿಕ್ಕಿಬಿದ್ದಿದ್ದಾರೆ.ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಪುರಸಭೆಯಲ್ಲಿ ಹಿಂದೆ ಕಾರ್ಯನಿರ್ವಹಿಸಿ ಮೈಸೂರಿಗೆ ವರ್ಗಾವಣೆಗೊಂಡಿದ್ದ ಕಿರಿಯ ಎಂಜಿನಿಯರ್ ಎ.ಡಿ.ನಾಗರಾಜು ಅವರ ಸೇವಾ ದಾಖಲಾತಿ ವರ್ಗಾವಣೆಗಾಗಿ ಈ ಮೂವರು 30 ಸಾವಿರ ರೂಪಾಯಿ ಲಂಚಕ್ಕಾಗಿ ಪೀಡಿಸುತ್ತಿದ್ದರು. ಎ.ಡಿ.ನಾಗರಾಜು ಮೈಸೂರು ಮಹಾನಗರ ಪಾಲಿಕೆಗೆ ವರ್ಗಾವಣೆಗೊಂಡಿದ್ದು, ಅಲ್ಲಿಂದ ತಿ.ನರಸಿಪುರಕ್ಕೆ ವರ್ಗವಾಗಿದ್ದರೂ ಅವರ ಸೇವಾ ದಾಖಲಾತಿ ಪುಸ್ತಕ ಮಾತ್ರ ಇನ್ನೂ ಪುರಸಭೆಯಿಂದ ಕಳುಹಿಸಿಕೊಟ್ಟಿರಲಿಲ್ಲ.