ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತ ಕೆ.ಆರ್.ರಾಮಕೃಷ್ಣ, `ದೇಶದ ವಿವಿಧ ಭಾಗಗಳಲ್ಲಿರುವ ಕನ್ನಡಿಗರಿಗೆ ಕನ್ನಡ ಪುಸ್ತಕಗಳನ್ನು ತಲುಪಿಸುವ ದೃಷ್ಟಿಯಿಂದ ಪ್ರಾಧಿಕಾರದ ವತಿಯಿಂದ ಆನ್ಲೈನ್ ಮಾರಾಟದ ಬಗ್ಗೆ ಈಗಾಗಲೇ ಯೋಜನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ' ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರಾಧಿಕಾರದ ವೆಬ್ಸೈಟ್ www.kannadapustakapra dhikara.com ಗೆ ಚಾಲನೆ ನೀಡಲಾಯಿತು. ಇಲಾಖೆಯ ಕಾರ್ಯದರ್ಶಿ ಬಸವರಾಜು, ಪ್ರಾಧಿಕಾರದ ಅಧ್ಯಕ್ಷ ಡಾ.ಸಿದ್ಧಲಿಂಗಯ್ಯ ಉಪಸ್ಥಿತರಿದ್ದರು.