ಮುಂಬೈ (ಪಿಟಿಐ): ಸಹೋದ್ಯೋಗಿ ವೈದ್ಯರೊಬ್ಬರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿ ನಾಲ್ಕು ಸಾವಿರ ನಿವಾಸಿ ವೈದ್ಯರು ಗುರುವಾರದಿಂದ ಮಹಾರಾಷ್ಟ್ರದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ.
ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದ ಸೊಲ್ಲಾಪುರದ ಮೂವರು ಪೊಲೀಸರನ್ನು ಅಮಾನತು ಮಾಡಬೇಕು. ವೈದ್ಯರ ರಕ್ಷಣೆ ಕಾಯ್ದೆ 2008ರ ಅನ್ವರ ಪೊಲೀಸರ ವಿರುದ್ಧ ದೂರು ದಾಖಲಿಸಬೇಕು ಹಾಗೂ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಮುಷ್ಕರನಿರತ ವೈದ್ಯರು ಒತ್ತಾಯಿಸಿದ್ದಾರೆ
.
ಸೊಲ್ಲಾಪುರದ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಹೆರಿಗೆ ಸಂದರ್ಭದಲ್ಲಿ ತುರ್ತು ವಿಭಾಗದಲ್ಲಿ ಕರ್ತವ್ಯನಿರತರಾಗಿದ್ದ ವೈದ್ಯರನ್ನು ಪೊಲೀಸರು ಬಲವಂತ ಮಾಡಿದ್ದಾರೆ. ಇದಕ್ಕೆ ಸ್ಪಂದಿಸದಿದ್ದ ವೈದ್ಯರ ಮೇಲೆ ಮೂವರು ಪೊಲೀಸರು ಹಲ್ಲೆ ನಡೆಸಿದ್ದಾರೆ.